ಸ್ವಂತ ಮಗುವನ್ನು ಕೊಂದು ಹೂತು ಹಾಕಿದ ತಂದೆ-ತಾಯಿ | ಸ್ಥಳೀಯರ ಮಾಹಿತಿಯಿಂದ ಪ್ರಕರಣ ಬೆಳಕಿಗೆ

ತಂದೆ – ತಾಯಿ ಇಬ್ಬರು ಸೇರಿ ಸ್ವಂತ ಮಗುವನ್ನೇ ಕೊಂದು ಶವವನ್ನು ಕಾಫಿತೋಟದಲ್ಲಿ ಹೂತಿರುವ ಅನುಮಾನದ ಮೇಲೆ ಮಗುವಿನ ಮೃತದೇಹ ಹೊರತೆಗೆದು ಅಧಿಕಾರಿಗಳು ಪರಿಶೀಲನೆ ನಡೆಸಿದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹೊಸಕೋಟೆ ಹೋಬಳಿಯ ಕಾಡ್ಲೂರು ಕೊಪ್ಪಲು ಎಂಬ ಗ್ರಾಮದಲ್ಲಿ ನಡೆದಿದೆ.

ಕೂಲಿ ಕೆಲಸಕ್ಕೆಂದು ಅಸ್ಸಾಂನಿಂದ ಆಲೂರು ತಾಲೂಕಿನ ಕೆ.ಹೊಸಕೋಟೆ ಹೋಬಳಿಗೆ ಆಗಮಿಸಿದ್ದ ಕೂಲಿಕಾರ್ಮಿಕರ ಕುಟುಂಬಸ್ಥರಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.

ಪತಿ, ಪತ್ನಿ ನಡುವೆ ಕೌಟುಂಬಿಕ ಕಾರಣಕ್ಕೆ ಜಗಳ ಪ್ರಾರಂಭವಾಗಿ ಮಗುವನ್ನು ಹೊಡೆದು ಸಾಯಿಸಿ ಶವವನ್ನು ಹೂತು ಹಾಕಲಾಗಿದೆ ಎನ್ನಲಾಗಿದೆ.ಆದರೆ ಮಗು ಅನಾರೋಗ್ಯದಿಂದಾಗಿ ಮೃತಪಟ್ಟಿದೆ ಎಂಬುದು ಪೋಷಕರ ವಾದವಾಗಿದೆ.

ಈ ಕುರಿತು ಸ್ಥಳೀಯರೊಬ್ಬರು ನೀಡಿದ ದೂರಿನ ಮೇರೆಗೆ ಒಂದೂವರೆ ವರ್ಷದ ಗಂಡು ಮಗುವಿನ ಮೃತದೇಹ ಹೊರತೆಗೆದು ಪರಿಶೀಲನೆ ನಡೆಸಲಾಗುತ್ತಿದೆ. ಉಪವಿಭಾಗಾಧಿಕಾರಿ ಮಾರ್ಗದರ್ಶನ ದಲ್ಲಿ ಸ್ಥಳಕ್ಕೆ ಭೇಟಿ ನೀಡಿರುವ ತಹಶೀಲ್ದಾರ್ ಮತ್ತು ಪೊಲೀಸ್ ಅಧಿಕಾರಿಗಳ ತಂಡ ಹೂತಿರುವ ಶವವನ್ನು ಹೊರ ತೆಗೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ

Leave A Reply

Your email address will not be published.