ಪುತ್ತೂರು: ಅನಾರೋಗ್ಯದಿಂದ 2 ತಿಂಗಳ ಬಾಣಂತಿ ಸಾವು

ಪುತ್ತೂರು: ಅನಾರೋಗ್ಯದಿಂದಾಗಿ ಎರಡು ತಿಂಗಳ ಬಾಣಂತಿ ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಕೃಷ್ಣನಗರದಲ್ಲಿ ಜೂ. 27 ರಂದು ನಡೆದಿದೆ.

ಮೃತರನ್ನು ಕೃಷ್ಣನಗರ ನಿವಾಸಿ ದಿಲೀಪ್ ಎಂಬವರ ಪತ್ನಿ ಅಕ್ಷತಾ(26) ಎಂದು ಗುರುತಿಸಲಾಗಿದೆ.


ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.


ಮೃತರು ಪತಿ ಮತ್ತು ಎರಡು ತಿಂಗಳ ಮಗುವನ್ನು ಅಗಲಿದ್ದಾರೆ.

Leave A Reply

Your email address will not be published.