ದ.ಕ.ನಾಳೆಯಿಂದ ಸಂಜೆ 5 ರವರೆಗೆ ಅಂಗಡಿ ತೆರೆಯಲು ಅವಕಾಶ,ಶನಿವಾರ ಆದಿತ್ಯವಾರ ವೀಕೆಂಡ್ ಕರ್ಫ್ಯೂ

ದ.ಕ.ದಲ್ಲಿ ನಾಳೆಯಿಂದ ಸಂಜೆ 5 ರವರೆಗೆ ಅಂಗಡಿ ತೆರೆಯಲು ಅವಕಾಶ ಇದ್ದು,ಶನಿವಾರ ಆದಿತ್ಯವಾರ ವೀಕೆಂಡ್ ಕರ್ಫ್ಯೂ ಇರಲಿದೆ.

ಕರ್ನಾಟಕ ಸರಕಾರದ ಮುಖ್ಯಕಾರ್ಯದರ್ಶಿಯವರ ಆದೇಶದಂತೆ ಜು.5 ರ ತನಕ ದಕ್ಷಿಣ ಕನ್ನಡ ಜಿಲ್ಲೆಗೆ 1ನೇ category ಯಲ್ಲಿರುವ ಜಿಲ್ಲೆಗಳಂತೆಯೇ ವಿನಾಯಿತಿ ಇರಲಿದ್ದು,ಇದರಿಂದಾಗಿ ಶುಕ್ರವಾರ ಸಂಜೆ 5 ರ ತನಕ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಇರಲಿದೆ.ಶನಿವಾರ, ಆದಿತ್ಯವಾರ ವಾರಾಂತ್ಯ ಕರ್ಫ್ಯೂ ಇರಲಿದೆ.

ಕೆಲ ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಗಣನೀಯವಾಗಿ ಕಡಿಮೆಯಾಗಿದೆ.

ಈ ಹಿನ್ನೆಲೆ ಇಂದು ನೂತನ ಮಾರ್ಗಸೂಚಿ ಹೊರಡಿಸಲಾಗಿದ್ದು, ನಾಳೆಯಿಂದ ಅನ್ವಯವಾಗುವಂತೆ ಪ್ರತಿ ದಿನ ಸಂಜೆ 5 ಗಂಟೆಯವರಿಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಹಾಗೂ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಆದೇಶ ಜುಲೈ 5 ಮುಂಜಾನೆ 5 ಗಂಟೆಯವರೆಗೆ ಮಾತ್ರ ಜಾರಿಯಲ್ಲಿರಲಿದೆ. ಹಾಗೂ ಭಾನುವಾರ ವಾರಾಂತ್ಯ ಕರ್ಫ್ಯೂ ಜಾರಿಯಾಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Leave A Reply

Your email address will not be published.