ಬೆಳ್ತಂಗಡಿ | ನೂತನ ತಾಲೂಕು ಸರ್ಕಲ್ ಇನ್ಸ್ಪೆಕ್ಟರ್ ಆಗಿ ಶಿವಕುಮಾರ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ತಾಲೂಕು ಸರ್ಕಲ್ ಇನ್ಸ್ಪೆಕ್ಟರ್ ಆಗಿ ಶಿವಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಮೂಲತಃ ಸಾಗರದವರಾದ ಇವರು ಉತ್ತರಕನ್ನಡದ ಹಲವೆಡೆ ಕರ್ತವ್ಯ ನಿರ್ವಹಿಸಿ ಬೆಂಗಳೂರಿನಿಂದ ಬೆಳ್ತಂಗಡಿಗೆ ವರ್ಗಾವಣೆಗೊಂಡಿದ್ದರು.

ತಮ್ಮ ವ್ಯಾಪ್ತಿಯಾದ ಬೆಳ್ತಂಗಡಿ, ವೇಣೂರು, ಪುಂಜಾಲಕಟ್ಟೆ, ಧರ್ಮಸ್ಥಳ,ಮತ್ತು ಸಂಚಾರಿ ಠಾಣೆಯ ಪಿಎಸ್‌ಐಗಳು ತಮ್ಮ ಠಾಣೆಯ ಪರವಾಗಿ ನೂತನ ಸರ್ಕಲ್ ಇನ್ಸ್ ಪೆಕ್ಟರ್ ಅವರನ್ನು ಹೂ ಗುಚ್ಚ ನೀಡಿ ಸ್ವಾಗತಿಸಿದರು.

ನಂತರ ತಮ್ಮ ವ್ಯಾಪ್ತಿಯ ಕಾನೂನು ಸುವ್ಯವಸ್ಥೆ ಬಗ್ಗೆ ಸಭೆ ನಡೆಸಿದರು.

ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದೇಶ್ ಪಿ.ಜಿ. ಬಜಪೆ ಠಾಣೆಗೆ ವರ್ಗಾವಣೆಗೊಂಡಿದ್ದು, ಇದೀಗ ಇವರು ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

Leave A Reply

Your email address will not be published.