ಕಡಬ: ರಾಮಕುಂಜದಲ್ಲಿ ನಡೆದ ಪೊಲೀಸ್ ಚೆಕ್ ಪೋಸ್ಟ್ ದ್ವಂಸ ಪ್ರಕರಣ..ಇಬ್ಬರು ಆರೋಪಿಗಳ ಬಂಧನ, ಷರತ್ತು ಬದ್ಧ ಜಾಮೀನು

ಕೆಲ ದಿನಗಳ ಹಿಂದೆ ಕಡಬ ತಾಲೂಕಿನ ರಾಮಕುಂಜದಲ್ಲಿ ಪೊಲೀಸ್ ಚೆಕ್ ಪೋಸ್ಟ್ ಧ್ವಂಸ ಹಾಗೂ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕಿಡಿಗೇಡಿಗಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲವು ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿದೆ.

ರಾಮಕುಂಜ ಗ್ರಾಮದ ಹಲ್ಲಿ ಅರಮನೆ ಇಸ್ಮಾಯಿಲ್ ಎಂಬವರ ಪುತ್ರ ಮಹಮ್ಮದ್ ಆಫೀಸ್ (28ವ) ಮತ್ತು ಕೊಯಿಲ ಗ್ರಾಮದ ಎಂತಾರು ಇಬ್ರಾಹಿಂ ಎಂಬವರ ಪುತ್ರ ಮೊಹಮ್ಮದ್ ನವಾಜ್ (27ವ) ಬಂಧಿತ ಆರೋಪಿಗಳಾಗಿದ್ದು, ಇಬ್ಬರೂ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿಗಳನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳಿಗೆ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರ ವಕೀಲರಾದ ಅಶ್ರಫ್ ಅಗ್ನಾಡಿ, ಅಬ್ದುಲ್ ಮಜೀದ್‌ಖಾನ್, ಅಬ್ದುಲ್ ರಹಿಮಾನ್ ಹಿರೇಬಂಡಾಡಿ ವಾದಿಸಿದ್ದರು. ಒಟ್ಟು 10 ಮಂದಿಯ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave A Reply

Your email address will not be published.