ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ, ಡಾ. ವೀರೇಂದ್ರ ಹೆಗ್ಗಡೆಯವರ ಸಹಯೋಗದಲ್ಲಿ ಧರ್ಮಸ್ಥಳದ ಗ್ರಾಮಸ್ಥರಿಗೆ ಕೋವಿಡ್ 19 ಲಸಿಕೆ ಅಭಿಯಾನ

ಬೆಳ್ತಂಗಡಿ, ಜುಲೈ-5 : ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ವತಿಯಿಂದ ಧರ್ಮಸ್ಥಳದ ಗ್ರಾಮಸ್ಥರಿಗೆ ಕೋವಿಡ್ 19 ಲಸಿಕೆ ಅಭಿಯಾನ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಸೋಮವಾರ ನಡೆಯಿತು.

ಶಾಸಕ ಹರೀಶ್ ಪೂಂಜ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೆಂದ್ರ ಹೆಗ್ಗಡೆಯವರ ಸಹಯೋಗ ದೊಂದಿಗೆ ಅಭಿಯಾನ ಪ್ರಾರಂಭವಾಯಿತು.

ಈ ಸಂದರ್ಭದಲ್ಲಿ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷೆ ಜಯಾ ಮೋನಪ್ಪ ಗೌಡ, ತಾಲೂಕು ವೈದಾಧಿಕಾರಿ ಡಾ. ಕಲಾಮಧು, ಧರ್ಮಸ್ಥಳ ಪ್ರಾ. ಅರೋಗ್ಯ ಕೇಂದ್ರದ ಆಡಳಿತ ವೈದಾಧಿಕಾರಿ ಡಾ. ಆಕಾಶ್, ತಾ.ಪಂ. ಮಾಜಿ ಅಧ್ಯಕ್ಷೆ ಧನಲಕ್ಷ್ಮೀ, ಪಿಡಿಒ ಉಮೇಶ್, ಲಸಿಕೆ ಸಂಯೋಜಕ ಉಮೇಶ್ ಕುಲಾಲ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಸ್ವಾಗತಿಸಿ, ಪ್ರಾಸ್ತಾವಿಸಿದರು. ಪೃಥ್ವಿಶ್ ಅವರು ಕಾರ್ಯಕ್ರಮ ನಿರ್ವಹಿಸಿದರು.

Leave A Reply

Your email address will not be published.