ಕಡಬ: ಕಡಬ ತಾಲೂಕು ಐತ್ತೂರು ಗ್ರಾಮದ ಪಂಜೋಡಿ ನಿವಾಸಿ ಶಿವಪ್ಪ ಗೌಡರ ಪುತ್ರ ಮೋಹಿತ್ (19) ಇಲಿ ಜ್ವರದಿಂದ ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕಳೆದ ಕೆಲವು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.
ಮೃತ ಮೋಹಿತ್ ತಾಯಿ ಸುಶೀಲಾ, ಸಹೋದರಿ ಗೀತಾ ಅವರನ್ನು ಅಗಲಿದ್ದಾರೆ