ಕಾಂಗ್ರೆಸ್ ರೌಡಿಗಳ ಪಕ್ಷ,ಅವರ ವ್ಯಕ್ತಿತ್ವದಲ್ಲೇ ಅದು ಕಾಣುತ್ತದೆ- ನಳಿನ್ ಕುಮಾರ್ ಕಟೀಲ್

ಕಾಂಗ್ರೆಸ್ಸಿಗರ ಈ ವರ್ತನೆ ಇದೇ ಮೊದಲಲ್ಲ. ಈ ಹಿಂದೆ ವಿಧಾನಸೌಧದ ಒಳಗೆ ಸಿದ್ದರಾಮಯ್ಯ ತೊಡೆತಟ್ಟಿ, ಯುದ್ದಕ್ಕೆ ಕರೆದು ಒಳಹೊಕ್ಕಿದವರು. ದೇವಸ್ಥಾನದ ಹಾಗಿರೋ ವಿಧಾನಸೌಧಕ್ಕೆ ಅಗೌರವ ತೋರಿದವರು ಕಾರ್ಯಕರ್ತರಿಗೆ ಗೌರವ ತೋರಿಸ್ತಾರಾ? ಕಾಂಗ್ರೆಸ್ ರೌಡಿಗಳ ಪಕ್ಷ ಅಲ್ಲ ಅಂತ ಯಾರೂ ಹೇಳಲ್ಲ, ಅವರ ವ್ಯಕ್ತಿತ್ವದಲ್ಲೇ ಅದು ಕಾಣುತ್ತದೆ. ಅವರ ಇತಿಹಾಸ ತೆಗೆದು ನೋಡಿ, ರೌಡಿ ಮಾತ್ರವಲ್ಲ, ಈ ದೇಶದಲ್ಲಿ ಎಲ್ಲಾ ಕೆಟ್ಟ ಕೆಲಸಗಳಿಗೆ ಪ್ರೇರಣೆ ಅವರೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಪತ್ರಕರ್ತರ ಜತೆ ಮಾತನಾಡಿದ, ಕಾರ್ಯಕರ್ತನಿಗೆ ಡಿ.ಕೆ ಶಿವಕುಮಾರ್ ಕಪಾಳಮೋಕ್ಷ ಮಾಡಿರುವ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ನಾವು ಏನೇ ಮಾತಾಡಿದ್ರೂ ಸಮಾಜ ನಮ್ಮನ್ನು ಗಮನಿಸುತ್ತಿರುತ್ತದೆ. ಕಾರ್ಯಕರ್ತರು ಮತ್ತು ಜನರು ನಮ್ಮ ಬಳಿ ಬೇಡಿಕೆ, ಇಚ್ಛೆ ಹಾಗೂ ಅಪೇಕ್ಷೆಯನ್ನು ಪಡುತ್ತಾರೆ. ಯಾರೇ ರಾಜಕಾರಣಿ ಆದ್ರೂ ಎಲ್ಲೇ ಮೀರಿ ವರ್ತಿಸಬಾರದು, ಇದು ಸರಿಯಾದ ನಡತೆ ಅಲ್ಲ.ಕಾಂಗ್ರೆಸ್ಸಿಗರ ಸಂಸ್ಕೃತಿ ಏನು ಅನ್ನೋದು ಇದರಿಂದ ಗೊತ್ತಾಗುತ್ತದೆ ಎಂದು ಕಿಡಿಕಾಡಿದರು.

ರಾಜಕೀಯ ಕ್ಷೇತ್ರದಲ್ಲಿ, ರಾಜಕಾರಣ ಇರಬೇಕು, ವೈಯಕ್ತಿಕ ವಿಚಾರಗಳಲ್ಲ. ರಾಜಕೀಯದಲ್ಲಿ ನಾವು ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡಲ್ಲ ಎಂದರು.

Leave A Reply

Your email address will not be published.