ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ

ಎರಡು ದಿನಗಳ ಹಿಂದೆ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಬೈಕಾಡಿ ಗ್ರಾಮದ ಕಾಮೇಶ್ವರ ದೇವಸ್ಥಾನ ವಠಾರದ ನಿವಾಸಿ ಶ್ರೀಧರ ಮಯ್ಯ (60) ಮೃತದೇಹ ಶನಿವಾರ ಬೆಳಿಗ್ಗೆ ಸಂತೆಕಟ್ಟೆ ಸಮೀಪದ ಉಪ್ಪೂರು ನದಿಯಲ್ಲಿ ಪತ್ತೆಯಾಗಿದೆ.

ಶನಿವಾರ ಬೆಳಿಗ್ಗೆ ಉಪ್ಪೂರು ನದಿಯಲ್ಲಿ ಮೃತದೇಹವೊಂದು ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ದಳದವರು ಹಾಗೂ ಪೊಲೀಸರು ಮೃತದೇಹವನ್ನು ಮೇಲೆತ್ತಿದ್ದಾರೆ.‌ ಮೃತದೇಹವನ್ನು ಶ್ರೀಧರ ಮಯ್ಯ ಅವರದೆಂದು ಅವರ ಪತ್ನಿ ಹಾಗೂ ಪುತ್ರಿ ಗುರುತಿಸಿದ್ದಾರೆ.

ಶ್ರೀಧರ ಮಯ್ಯ ಅವರು ಜುಲೈ 8ರಂದು ಕೋರ್ಟ್ ಕೇಸಿನ ವಿಚಾರವಾಗಿ ಚಿಕ್ಕಮಗಳೂರಿಗೆ ಹೋಗುವುದಾಗಿ ಮನೆಯಲ್ಲಿ ಹೇಳಿ ತೆರಳಿದ್ದರು. ಅವರು ತೆರಳಿದ ಬಳಿಕ ಮಯ್ಯ ಬರೆದಿದ್ದಾರೆ ಎನ್ನಲಾದ ರಿಜಿಸ್ಟರ್ಡ್‌ ಪತ್ರವೊಂದು ದೇವಸ್ಥಾನಕ್ಕೆ ಬಂದಿದ್ದು, ದೇವಸ್ಥಾನದ ಅಧ್ಯಕ್ಷರಿಗೆ ಬರೆದ ಆ ಪತ್ರದಲ್ಲಿ “ನನಗೆ ತುಂಬಾ ಆರೋಗ್ಯ ಸಮಸ್ಯೆ ಕಾಡುತ್ತಿದೆ. ವಿಪರೀತ ಕಾಲುನೋವು ಹಾಗೂ ವಿಪರೀತ ಬಿಕ್ಕಳಿಕೆಯಿಂದ ಬದುಕಿನಲ್ಲಿ ಜಿಗುಪ್ಸೆಗೊಂಡಿದ್ದು, ಜೀವನವೇ ಬೇಡವೆನಿಸಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಅದರಲ್ಲಿ ಬರೆಯಲಾಗಿತ್ತು.

ಈ ಪತ್ರ ಸಿಕ್ಕಿದ ಕೂಡಲೇ ಮನೆಯವರು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು

Leave A Reply

Your email address will not be published.