ವಿದ್ಯುತ್ ಸ್ಪರ್ಶಿಸಿ ಒಂದೇ ಕುಟುಂಬದ ಆರು ಮಂದಿ ಬಲಿ

ಸೆಪ್ಟಿಕ್ ಟ್ಯಾಂಕ್ ನಿರ್ಮಾಣ ವೇಳೆ ವಿದ್ಯುತ್ ಸ್ಪರ್ಶದಿಂದ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟ ದುರ್ಘಟನೆ ಸಂಭವಿಸಿದೆ.

ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಮಹುವಾ ಜ್ವಾಲಾ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಸೆಪ್ಟಿಕ್ ಟ್ಯಾಂಕ್ ನಿರ್ಮಾಣದ ವೇಳೆ ಈ ದುರಂತ ಸಂಭವಿಸಿದೆ ಎಂದು ಬಿಜಾವರ್ ಪೊಲೀಸ್ ಠಾಣಾ ಉಸ್ತುವಾರಿ ಮುಕೇಶ್ ಸಿಂಗ್ ಠಾಕೂರ್ ತಿಳಿಸಿದ್ದಾರೆ.

ಶಟರ್ ಪ್ಲೇಟ್‌ಗಳನ್ನು ತೆಗೆಯಲು ವ್ಯಕ್ತಿಯೊಬ್ಬ ಟ್ಯಾಂಕ್‌ನೊಳಗೆ ಇಳಿದಿದ್ದ. ಆಗ ವಿದ್ಯುತ್ ಸೋರಿಕೆಯಾಗಿ ಪ್ಲೇಟ್‌ಗಳಿಗೆ ವಿದ್ಯುತ್ ಸ್ಪರ್ಶಿಸಿ ದುರ್ಘಟನೆ ಸಂಭವಿಸಿದೆ. ಆತನನ್ನು ರಕ್ಷಿಸಲು ಕುಟುಂಬದ ಇತರ ಸದಸ್ಯರು ಕೂಡ ಟ್ಯಾಂಕಿಗೆ ಇಳಿದಾಗ ಎಲ್ಲರೂ ವಿದ್ಯುತ್ ಆಘಾತಕ್ಕೆ ಒಳಗಾದರು ಎಂದು ಹೇಳಲಾಗುತ್ತಿದೆ.

ಆಸ್ಪತ್ರೆ ತಲುಪುವ ಮೊದಲೇ ಎಲ್ಕರೂ ಮೃತಪಟ್ಟಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಬಗ್ಗೆ ಬಿಜಾವರ್ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.