ಇನ್ನೊಮ್ಮೆ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ 10,000 ಕೋಟಿ ರೂಪಾಯಿ ನೀಡುತ್ತೇನೆ, SDPI, PFI ಬ್ಯಾನ್ ಮಾಡಿ | ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿಕೆ

ಮಂಗಳೂರು: ಈ ದೇಶದ ಸಂಪತ್ತಿನಲ್ಲಿ ಮುಸ್ಲಿಂರಿಗೂ ಪಾಲು ಕೊಡಬೇಕು. ಅಲ್ಪಸಂಖ್ಯಾತರಿಗೆ 3,500 ಕೋಟಿ ರೂಪಾಯಿಗೂ ಹೆಚ್ಚು ಅನುದಾನ ನೀಡಿದ್ದೇನೆ. ಇನ್ನೊಮ್ಮೆ ಅಧಿಕಾರಕ್ಕೆ ಬಂದರೆ 10,000 ರೂಪಾಯಿ ನೀಡುತ್ತೇನೆ
ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಮಂಗಳೂರಿನ ಪುರಭವನದಲ್ಲಿ ನಡೆದ ಭಾವೈಕ್ಯತಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾವೈಕ್ಯತೆ ಚೆದುರುವಂತಹ ಮಾತಾಡಿದ್ದಾರೆ.

‘ಈ ಬಿಜೆಪಿಯವರು ಅಲ್ಪಸಂಖ್ಯಾತರಿಗೆ ಇದ್ದ ಅನುದಾನದಲ್ಲೂ ಕಡಿಮೆ ಮಾಡಿದ್ದಾರೆ. ಬಿಜೆಪಿಯವರು ಸಂವಿಧಾನ ವಿರೋಧಿಗಳು. ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಣೆ ಮಾಡುತ್ತಿಲ್ಲ. ಸಂವಿಧಾನದ ಬದಲಾವಣೆ ಬಗ್ಗೆ ಅನಂತ ಕುಮಾರ್ ಹೆಗಡೆ ಹೇಳಿದ್ದಾರೆ. ಅನಂತ ಕುಮಾರ್ ಹೆಗಡೆ ಗ್ರಾಮ ಪಂಚಾಯತ್ ಸದಸ್ಯನಾಗೋಕ್ಕು ನಾಲಾಯಕ್ ‘ ಎಂದು ಹೇಳಿದ್ದಾರೆ.

ಹಿಂದೂಗಳಲ್ಲೂ ಅನೇಕ ಜನ ಮುಸ್ಲಿಂ ರ ರೀತಿ ಇದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ ಸಿದ್ದರಾಮಯ್ಯ. SFI ಮತ್ತು PFI ಎರಡೂ ಒಂದೇ ಎಂದು ಹೇಳಿಕೆ ನೀಡಿದ್ದಾರೆ ಸಿದ್ರಾಮಣ್ಣ !! PFI, SDPI ಯವರ ಮಾತುಗಳನ್ನು ಕೇಳೋಕೆ ಹೋಗಬೇಡಿ. ಇವರು ಬಿಜೆಪಿಗೆ ಹಿಂದುಗಡೆಯಿಂದ ಸಪೋರ್ಟ್ ಮಾಡುವವರು. ಬಿಹಾರದ ಚುನಾವಣೆಯಲ್ಲೂ ಇವರಿಂದ ಬಿಜೆಪಿಗೆ ಲಾಭವಾಯಿತು. ಮುಸ್ಲಿಂ ರ ಓಟನ್ನು ಒಡೆಯುವಂತಹ ಸಂಚು ಮಾಡುತ್ತಿದ್ದಾರೆ. ಈ ಹುನ್ನಾರಕ್ಕೆ ಯಾರೂ ಕೈ ಜೋಡಿಸಬಾರದು. ಬೆಂಗಳೂರು ಗಲಭೆ ಸಂಧರ್ಭದಲ್ಲಿ SDPI, PFI ಬ್ಯಾನ್ ಅಂತಾ ಹೇಳಿದ್ರು. ಸೂಕ್ತ ದಾಖಲೆಯಿದ್ದರೆ ಕೂಡಲೇ ಬ್ಯಾನ್ ಮಾಡಬೇಕು ಎಂದು ಸವಾಲು ಹಾಕಿದ್ದಾರೆ.

Leave A Reply

Your email address will not be published.