ಕಾಲಿಗೆ ಬಲೆ ಸಿಲುಕಿ ಮೀನುಗಾರ ನೀರಲ್ಲಿ ಮುಳುಗಿ ಸಾವು

ಮಂಗಳೂರಿನ ಅಳಿವೆ ಬಾಗಿಲು ನದಿ ಸಮೀಪ ಮೀನುಗಾರರೊಬ್ಬರು ಗುರುವಾರ ಬಲೆ ಹರಡಿ ಮೀನು ಹಿಡಿಯುತ್ತಿದ್ದ ಸಂದರ್ಭ ಮುಳುಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

ತೋಟಬೆಂಗ್ರೆ ನಿವಾಸಿ
ಜಯ ಪುತ್ರನ್(55) ಅವರು ಮೀನು ಹಿಡಿಯುವ ಕೆಲಸ ಮಾಡುತ್ತಿದ್ದು.ಗುರುವಾರ ಭಾರೀ ಗಾಳಿ ಮಳೆ ಬಂದಾಗ ಆಕಸ್ಮಿಕವಾಗಿ ಬಲೆ ಕೈ ಕಾಲಿಗೆ ಸಿಲುಕಿ ಈಜಲಾಗದೆ ಮುಳುಗಿ ಮೃತಪಟ್ಟರು ಎನ್ನಲಾಗಿದೆ.

ಮನೆಗೆ ಬಾರದೇ ಇದ್ದಾಗ ಹುಡುಕಾಟ ನಡೆಸಿದಾಗ ಮೃತದೇಹ ಕಸಬ ಬೆಂಗ್ರೆ ಬಳಿ ಪತ್ತೆಯಾಯಿತು. ಪತ್ನಿ,ಪುತ್ರ,ಪುತ್ರಿಯನ್ನು ಹೊಂದಿದ್ದು ಕುಟುಂಬಕ್ಕೆ ಇವರೇ ಜೀವನಾಧಾರವಾಗಿದ್ದರು.

ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave A Reply

Your email address will not be published.