ಕಡಬ : ರಕ್ತ ಸ್ರಾವ, ಅವಳಿ ಮಕ್ಕಳಿಗೆ ಜನ್ಮನೀಡಿದ ತಾಯಿ ಮೃತ್ಯು

ಕಡಬ : ವಿಪರೀತ ರಕ್ತಸ್ರಾವದಿಂದಾಗಿ ಕಡಬದ ಬಾಣಂತಿ ಮಹಿಳೆಯೋರ್ವರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ.

ಮೃತ ಮಹಿಳೆಯನ್ನು ಕಡಬ ತಾಲೂಕು ಕೊಂಬಾರು ಗ್ರಾಮದ ಇಡ್ಯಡ್ಕ ಕಟ್ಟೆ ನಿವಾಸಿ ಚೇತನ್ ಎಂಬವರ ಪತ್ನಿ ವಿದ್ಯಾ(30) ಎಂದು ಗುರುತಿಸಲಾಗಿದೆ. ಮೃತರನ್ನು ಹೆರಿಗೆಗಾಗಿ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಬೆಳಗಿನ ಜಾವ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ ಎನ್ನಲಾಗಿದೆ. ಬಳಿಕ ತೀವ್ರ ರಕ್ತಸ್ರಾವದಿಂದಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ‌.

Leave A Reply

Your email address will not be published.