ನೆಲ್ಯಾಡಿ: ಪೆರಿಯಶಾಂತಿ ಬಳಿ ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಅಪರಿಚಿತ ವಾಹನ | ಬೈಕ್ ಸವಾರ ಸಾವು , ಸಹ ಸವಾರ ಗಂಭೀರ

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರಿಯಾಶಾಂತಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸು ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರನೊಬ್ಬ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದ್ದು, ಸಹಸವಾರ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವಿವರ:ಗುಂಡ್ಯದಿಂದ ನೆಲ್ಯಾಡಿ ಕಡೆಗೆ ಬರುತ್ತಿದ್ದ ಬೈಕಿಗೆ ವಿರುದ್ಧ ದಿಕ್ಕಿನಿಂದ ಆಗಮಿಸಿದ ಸರ್ಕಾರಿ ಸಾರಿಗೆ ಬಸ್ ಲಾವತ್ತಡ್ಕ ಸಮೀಪ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದ್ದು, ಅಪಘಾತ ನಡೆಸಿದ ಕೂಡಲೇ ಬಸ್ಸು ಸ್ಥಳದಿಂದ ಕಾಲ್ಕಿತ್ತಿದ್ದು,ಕೂಡಲೇ ಮಾಹಿತಿ ಪೊಲೀಸರಿಗೆ ಮುಟ್ಟಿದ್ದು,ಪೊಲೀಸರು ಬೆನ್ನಟ್ಟಿ ಬಸ್ಸನ್ನು ವಶಕ್ಕೆ ಪಡೆದಿದ್ದಾರೆ.ಮೃತ ಬೈಕ್ ಸವಾರನ ಪರಿಚಯ ಇನ್ನಷ್ಟೇ ದೊರೆಯಬೇಕಿದ್ದು,ಗಂಭೀರ ಗಾಯಗೊಂಡಿರುವ ವ್ಯಕ್ತಿಯನ್ನು ಸಕಲೇಶಪುರ ತಾಲೂಕಿನ ಕೆಂಚಮ್ಮನ ಹೊಸಪೇಟೆ ನಿವಾಸಿ ಮೋಹನ್ ಎಂದು ಗುರುತಿಸಲಾಗಿದ್ದು, ಗಾಯಾಳುವನ್ನು ತಕ್ಷಣವೇ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Leave A Reply

Your email address will not be published.