ಕರ್ನಾಟಕ ಸರಕಾರ ಒಕ್ಕಲಿಗರ ಅಭಿವದ್ಧಿ ನಿಗಮ ರಚಿಸಿ ಆದೇಶ ಹೊರಡಿಸಿದೆ.
ರಾಜ್ಯದಲ್ಲಿರುವ ಒಕ್ಕಲಿಗರಲ್ಲಿ ಕುಂಚಟಿಗ ಒಕ್ಕಲಿಗ, ದಾಸ ಒಕ್ಕಲಿಗ, ಮರಸು ಒಕ್ಕಲಿಗ, ನಾಮಧಾರಿ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಗಂಗಡಕಾರ ಒಕ್ಕಲಿಗ ಮತ್ತಿತರ ಹಲವಾರು ವರ್ಗಗಳಿದ್ದು ಈ ಸಮುದಾಯಕ್ಕೆ ಹಿಂದುಳಿದ ವರ್ಗಗಳ ಮೀಸಲಾತಿ ವಿಭಾಗದಲ್ಲಿ ಮೀಸಲಾತಿ ನೀಡಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರಕಾರ ಒಕ್ಕಲಿಗರ ಅಭಿವೃದ್ದಿ ನಿಗಮವನ್ನು ರಚಿಸಿ ಆದೇಶ ಮಾಡಿರುವುದು ಒಕ್ಕಲಿಗ ಸಮುದಾಯದಲ್ಲಿ ಸಂಭ್ರಮ ಮನೆ ಮಾಡಿದೆ .