ಬಿಜೆಪಿ ವತಿಯಿಂದ ನಾರಾವಿ ಹಾಗೂ ಪಡಂಗಡಿ ಮಹಾಶಕ್ತಿ ಕೇಂದ್ರದ ಪಂಚಾಯತ್ ಸದಸ್ಯರ ಅಭ್ಯಾಸ ವರ್ಗ ಉದ್ಘಾಟನೆ

ಭಾರತೀಯ ಜನತಾ ಪಾರ್ಟಿ,ಬೆಳ್ತಂಗಡಿ ಮಂಡಲದ ವತಿಯಿಂದ ಆಯೋಜಿಸಲಾಗಿರುವ ನಾರಾವಿ ಹಾಗೂ ಪಡಂಗಡಿ ಮಹಾಶಕ್ತಿ ಕೇಂದ್ರ ಮಟ್ಟದ ಪಂಚಾಯತ್ ಸದಸ್ಯರ ಅಭ್ಯಾಸ ವರ್ಗವನ್ನು ಅಳದಂಗಡಿ ಸ್ವರಾಜ್ ಸಭಾಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜ ರವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುದರ್ಶನ್ ರವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶ್ರೀನಿವಾಸ ರಾವ್ ಧರ್ಮಸ್ಥಳ ಮತ್ತು ಗಣೇಶ್ ನಾವೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ಸದಾನಂದ ಪೂಜಾರಿ ಉಂಗಿಲಬೈಲ್, ಮೋಹನ್ ಅಂಡಿಂಜೆ ಹಾಗೂ ಪಕ್ಷದ ಸ್ಥಳೀಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave A Reply

Your email address will not be published.