ವೀರಮಂಗಲ: ರೈಲ್ವೇ ಹಳಿಗೆ ಧರೆ ಕುಸಿತ ,ರೈಲು ಸಂಚಾರ ಸ್ಥಗಿತ ,ರೈಲಿನ ಗಾರ್ಡ್ ಗೆ ಹಾನಿ

ಸವಣೂರು: ಪುತ್ತೂರು ಕಬಕ -ಸುಬ್ರಹ್ಮಣ್ಯ ರೈಲ್ವೇ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ರೈಲು ಚಲಿಸುತ್ತಿದ್ದಾಗ ಧರೆ ಕುಸಿದು ರೈಲಿನ ಗಾರ್ಡ್‌ಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಮಂಗಳೂರು-ಬೆಂಗಳೂರು ಪ್ರಯಾಣಿಕ ರೈಲು ಈ ಹಳಿಯಲ್ಲಿ ಹಾದು ಹೋಗುತ್ತಿದ್ದಾಗ ಏಕಾ ಏಕಿ ಧರೆ ಕುಸಿದಿದ್ದು,ಮಣ್ಣು ರೈಲಿನ ಮುಂಭಾಗಕ್ಕೆ ಕುಸಿದಿದ್ದು,ರೈಲಿನ ಗಾರ್ಡ್ ಗೆ ಹಾನಿಯಾಗಿದೆ.

ರೈಲು ಈಗ ಹಳಿಯಲ್ಲಿ ಬಾಕಿಯಾಗಿದ್ದು,ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು,ಮಣ್ಣು ತೆರವು ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Leave A Reply

Your email address will not be published.