ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಮಂಗಳೂರು: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನೋರ್ವನ ಶವ ಸಸಿಹಿತ್ಲು ಮುಂಡ ಬೀಚ್ ನಲ್ಲಿ ಪತ್ತೆಯಾಗಿದೆ.

ನಾಪತ್ತೆಯಾಗಿದ್ದ ಮುಕ್ಕ ನಿವಾಸಿ ಕಿರಣ್ ಶೆಟ್ಟಿ ಅವರು ಮುಂಡ ಬೀಚ್‌ನಲ್ಲಿ ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ.

ಕಿರಣ್ ಶೆಟ್ಟಿ ನಾಪತ್ತೆಯಾದ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಿರಣ್ ಶೆಟ್ಟಿ ಪಾಲುದಾರಿಕೆಯಲ್ಲಿ ಅಂಗಡಿ ನಡೆಸುತ್ತಿದ್ದರು. ಕೋವಿಡ್ ಕಾರಣದಿಂದ ವ್ಯಾಪಾರ ಇಲ್ಲದೆ ಹಣದ ಸಮಸ್ಯೆಯಿಂದ ಇದ್ದರು ಎಂದು ಕುಟುಂಬಸ್ಥರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದರು.

Leave A Reply

Your email address will not be published.