ಸುಳ್ಯ : ಕೆಎಫ್‌ಡಿಸಿ ಫಾರೆಸ್ಟರ್ ಆತ್ಮಹತ್ಯೆ

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಸುಳ್ಯ ವಿಭಾಗದ ಫಾರೆಸ್ಟರ್ ಉಮೇಶ್ (35) ಎಂಬವರು ಕಳೆದ ಶನಿವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಅಸ್ವಸ್ಥಗೊಂಡಿದ್ದ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ವೈದ್ಯರ ಸಲಹೆ ಮೇರೆಗೆ ಮಂಗಳೂರಿಗೆ ಕರೆದೊಯ್ಯಲಾಗಿತ್ತು.

ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೂ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ತಿಳಿದುಬಂದಿದೆ.

Leave A Reply

Your email address will not be published.