ನಾಳೆ ಎಸ್ಎಸ್ಎಲ್ ಸಿ ಫಲಿತಾಂಶ | ನೂತನ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಂದ ಸೋಮವಾರ ಸಂಜೆ ಪ್ರಕಟ

ಕೊರೋನಾ ಆತಂಕದ ನಡುವೆಯೇ ನಡೆದ ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಸುದ್ದಿಗೋಷ್ಠಿಯಲ್ಲಿ ಸೋಮವಾರ ಸಂಜೆ 3.30 ಕ್ಕೆ ಫಲಿತಾಂಶ ಪ್ರಕಟಿಸಲಿದ್ದಾರೆ. ಬೆಂಗಳೂರಿನಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ ಎಂದು ತಿಳಿಸಲಾಗಿದೆ.

ಶೇಕಡಾ 99.65 % ವಿದ್ಯಾರ್ಥಿಗಳ ಹಾಜರಾತಿಯೊಂದಿಗೆ , ಜುಲೈ 19 ಹಾಗೂ 22 ರಂದು ಒಂದೊಂದು ದಿನ ಮೂರು ವಿಷಯಗಳಿಗೆ ಪರೀಕ್ಷೆ ನಡೆದಿದ್ದು, ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಪ್ರಶ್ನೆಗಳನ್ನು ಕೇಳುವ ಮೂಲಕ ಪರೀಕ್ಷೆ ನಡೆದಿತ್ತು.

ಕೊರೋನಾ ಸೋಂಕು ಆತಂಕದ ನಡುವೆಯೂ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ 8,49,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು .ಮಂಡಳಿಯು ಈಗಾಗಲೇ ಮೌಲ್ಯಮಾಪನ ಪೂರ್ಣಗೊಳಿಸಿದ್ದು, ಸೋಮವಾರ ಫಲಿತಾಂಶ ಬಿಡುಗಡೆಗೆ ಗ್ರೀನ್ ಸಿಗ್ನಲ್ ನೀಡಿದೆ.

Leave A Reply

Your email address will not be published.