ಉರುಳಿಗೆ ಸಿಕ್ಕ ಚಿರತೆ ಬೋನಿಗೆ | ಯಶಸ್ವಿ ಕಾರ್ಯಾಚರಣೆ

ಪೆರುವಾಜೆ ಗ್ರಾಮದ ಕಾನಾವು ಸಮೀಪದ ಪೆರುವಾಜೆ ಬ್ಲಾಕ್ ಅರಣ್ಯ ಪ್ರದೇಶದಲ್ಲಿ ಉರುಳಿಗೆ ಬಿದ್ದ ಚಿರತೆಯನ್ನು ಯಶಸ್ವಿ ಕಾರ್ಯಾಚರಣೆಯ ಮೂಲಕ ಸೆರೆ ಹಿಡಿಯಲಾಗಿದೆ.

ತಜ್ಞ ವೈದ್ಯರ ತಂಡ ಅರವಳಿಕೆ ಮದ್ದು ಪ್ರಯೋಗಿಸಿದ ಅನಂತರ ಚಿರತೆಯನ್ನು ಸೆರೆ ಹಿಡಿದು ಬೋನಿನ‌ ಮೂಲಕ ಪಶ್ಚಿಮ ಘಟ್ಟದ ಕಾಡಿಗೆ ಕೊಂಡೊಯ್ಯಲಾಯಿತು. ಕಾರ್ಯಾಚರಣೆ ವೇಳೆ ಸಂದರ್ಭದಲ್ಲಿ ಪುತ್ತೂರು, ಸುಳ್ಯ ಉಪವಿಭಾಗದ ಅರಣ್ಯಧಿಕಾರಿಗಳು ಪಾಲ್ಗೊಂಡಿದ್ದರು.

Leave A Reply

Your email address will not be published.