ಕಾರಿನಲ್ಲಿ ಕುಳಿತು ಬೆಂಕಿ ಹಚ್ಚಿಕೊಂಡು ಯುವ ಪ್ರೇಮಿಗಳು ಆತ್ಮಹತ್ಯೆ

ಕಾರಿನಲ್ಲಿ ಕುಳಿತು ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನಲ್ಲಿ ನಡೆದಿದೆ.

ಶ್ರೀನಿವಾಸ್ (23),ಕಾಂಚನಾ (20), ಎಂಬವರೇ ಆತ್ಮಹತ್ಯೆ ಶರಣಾದ ಪ್ರೇಮಿಗಳು.

ಇಬ್ಬರೂ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಾಂಚನಾ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಆಗಿದ್ದು, ಶ್ರೀನಿವಾಸ್ ಚಾಲಕ ವೃತ್ತಿ ಮಾಡುತ್ತಿದ್ದ ಎನ್ನಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಚಾಮರಾಜನಗರ ಎಸ್ಪಿ ಭೇಟಿ ನೀಡಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

Leave A Reply

Your email address will not be published.