ದ.ಕ.ವಾರಾಂತ್ಯ ಕರ್ಫ್ಯೂ | ಸ್ವಾತಂತ್ರ್ಯ ದಿನಾಚರಣೆಗೂ ಬಡಿದ ಕೊರೊನಾ ಕರಿ ಛಾಯೆ

ಗಡಿ ಜಿಲ್ಲೆಯಲ್ಲಿ ಕೊರೊನಾ ಉಲ್ಬಣ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಾದ್ಯಂತ ವಾರಾಂತ್ಯ ಕರ್ಫ್ಯೂ ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರ ವರೆಗೆ ಜಾರಿಯಲ್ಲಿರಲಿದೆ.

ಈ ವೇಳೆ ಅಗತ್ಯ ವಸ್ತುಗಳ ಖರೀದಿಗೆ ಅಪರಾಹ್ನ 2 ಗಂಟೆಯವರೆಗೆ ಅವಕಾಶವಿರಲಿದೆ. ಉಳಿದಂತೆ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಶನಿವಾರ ನಡೆಯಲಿರುವ ವಿ.ವಿ. ಪದವಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ರವಿವಾರ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯನ್ನು ಕೂಡ ನಿಗದಿತ ಸಿಬಂದಿ ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಇಲ್ಲದೆ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿದೆ.

Leave A Reply

Your email address will not be published.