ರಕ್ಷಾಬಂಧನಕ್ಕೆ ಮಹಿಳೆಯರಿಗೆ ಬಂಪರ್ ಕೊಡುಗೆ | ರಾಜ್ಯ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ!!!

ರಕ್ಷಾ ಬಂಧನದ ದಿನದಂದು ಉತ್ತರಪ್ರದೇಶದ ಮಹಿಳೆಯರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಂಪರ್ ಆಫರ್ ಒಂದನ್ನು ನೀಡಿದ್ದಾರೆ.

ಹೌದು, ಕಳೆದ ವರ್ಷದಂದತೆಯೇ ಈ ವರ್ಷವೂ ಮಹಿಳೆಯರಿಗೆ ಮುಖ್ಯಮಂತ್ರಿ ಭರ್ಜರಿ ಕೊಡುಗೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ.

ಆಗಸ್ಟ್ 22ರಂದು ರಕ್ಷಾ ಬಂಧನವನ್ನು ಆಚರಿಸಲಾಗುತ್ತಿದೆ. ಈ ದಿನ ರಾಜ್ಯ ಸಾರಿಗೆ ಸಂಸ್ಥೆಯ ಯಾವುದೇ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿಯೇ ಪ್ರಯಾಣ ಮಾಡುವ ಆಫರ್ ನೀಡಲಾಗಿದೆ.

ಈ ವಿಶೇಷ ಆಫರ್ ಆಗಸ್ಟ್ 21ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದ್ದು, 22 ರ ಮಧ್ಯರಾತ್ರಿಯವರೆಗೆ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಅಲ್ಲದೆ ಉಚಿತ ಪ್ರಯಾಣದ ವೇಳೆ ಬಸ್ಸಿನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಸೂಕ್ತ ಭದ್ರತೆಯನ್ನು ಒದಗಿಸಲಾಗುತ್ತದೆ.

ಕೊರೋನಾದಿಂದಾಗಿ ಸಭೆ ಸಮಾರಂಭಗಳಿಗೆ ಈಗಾಗಲೇ ನಿರ್ಬಂಧಗಳನ್ನು ಹಾಕಲಾಗಿದೆ. ಸದ್ಯ ಕೊರೊನಾ 3ನೇ ಅಲೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಸಂಭ್ರಮಾಚಾರಣೆ ಮಾಡುವ ಬದಲು ಮನೆಯಲ್ಲಿಯೇ ರಕ್ಷಾಬಂಧನ ಆಚರಿಸುವಂತೆ ಕರೆ ನೀಡಲಾಗಿದೆ.

Leave A Reply

Your email address will not be published.