ತ್ರಿಶೂಲದಿಂದ ಇರಿದು ದೇವಸ್ಥಾನದ ಅರ್ಚಕರ ಬರ್ಬರ ಕೊಲೆ | ಕೊಲೆ ಮಾಡಿ ದೇಹವನ್ನು ದೇವಸ್ಥಾನದ ಆವರಣದಲ್ಲೇ ಸುಡಲು ಪ್ರಯತ್ನಿಸಿದ ದುಷ್ಟರು !!

ತ್ರಿಶೂಲದಿಂದ ಇರಿದು ದೇವಸ್ಥಾನದ ಅರ್ಚಕರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹರಿಯಾಣ ರಾಜ್ಯದ ಪಲ್ವಾಲ್ ಜಿಲ್ಲೆಯಲ್ಲಿ ನಡೆದಿದೆ.

ಪಲ್ವಾಲ್ ಜಿಲ್ಲೆಯ ಬಂಚಾರಿ ಗ್ರಾಮದಲ್ಲಿ ಮುಂಜಾನೆ 7 ಗಂಟೆಗೆ ಈ ದುರ್ಘಟನೆ ನಡೆದಿದ್ದು, ಚರಣಗಿರಿ ಮಹಾರಾಜ್ ಮೃತಪಟ್ಟ ಅರ್ಚಕರೆಂದು ಗುರುತಿಸಲಾಗಿದೆ.

ಅರ್ಚಕರನ್ನು ಕೊಲೆ ಮಾಡಿ ಮೃತದೇಹಕ್ಕೆ ಬೆಂಕಿ ಕೂಡ ಹಚ್ಚಲಾಗಿದ್ದು, ದೇಗುಲದ ಆವರಣದಲ್ಲಿ ಅರೆ ಸುಟ್ಟ ಶವ ಪತ್ತೆಯಾಗಿದೆ. ಈ ಭೀಕರ ಘಟನೆಗೆ ಇಡೀ ಹರಿಯಾಣವೇ ಬೆಚ್ಚಿ ಬಿದ್ದಿದೆ.

ಅರ್ಚಕನನ್ನು ಕೊಲೆ ಮಾಡಿ ಮೃತದೇಹವನ್ನು ಸುಟ್ಟುಹಾಕಲು ಪ್ರಯತ್ನಿಸಿದ ದುಷ್ಟರು, ಶವಕ್ಕೆ ದೇವಾಲಯದ ಆವರಣದಲ್ಲಿಯೇ ಬೆಂಕಿ ಹಚ್ಚಿದ್ದಾರೆ. ಬೆಡ್‍ಶೀಟ್‍ನಲ್ಲಿ ಸುತ್ತಿ ಶವಕ್ಕೆ ಬೆಂಕಿ ಹಚ್ಚಲಾಗಿದೆ. ದೇಹ ಅರೆಬರೆ ಸುಟ್ಟು ಹೋಗಿದ್ದು, ಬೆಳಗ್ಗೆ ಗ್ರಾಮಸ್ಥರು ಪೊಲೀಸರಿಗೆ ಈ ವಿಷಯ ತಿಳಿಸಿದ್ದಾರೆ.

20 ವರ್ಷಗಳಿಂದ ಆ ಗ್ರಾಮದಲ್ಲಿ ವಾಸವಾಗಿದ್ದ ಚರಣಗಿರಿ ಮಹಾರಾಜ್ ಅವರನ್ನು ಭೇಟಿಯಾಗಲು ಬುಧವಾರ ಸಂಜೆ ಅವರ ಸ್ನೇಹಿತ ಮೋನಿ ಮಹಾರಾಜ್ ಬಂದಿದ್ದರು. ಗೆಳೆಯ ಬಂದು ಮಾತನಾಡಿ ಹೋದ ಮರುದಿನವೇ ಚರಣಗಿರಿ ಮಹಾರಾಜ್ ಕೊಲೆಯಾಗಿದೆ. ಈ ಕೊಲೆ ನಡೆದ ಬಳಿಕ ಮೋನಿ ಮಹಾರಾಜ್ ನಾಪತ್ತೆಯಾಗಿದ್ದಾನೆ. ಆತನೇ ಈ ಕೊಲೆ ಮಾಡಿಸಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶಿಲನೆ ನಡೆಸಿದ್ದಾರೆ.
ಅರ್ಚಕನ ಎದೆ ಭಾಗಕ್ಕೆ ತ್ರಿಶೂಲದಿಂದ ಇರಿದಿರುವ ಗುರುತುಗಳು ಪತ್ತೆಯಾಗಿದ್ದು, ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Leave A Reply

Your email address will not be published.