ಬೆಳ್ತಂಗಡಿ | ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಚರಂಡಿಗೆ ಮಗುಚಿ ಬಿದ್ದ ಲಾರಿ

ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಯಲ್ಲಿ ರಸ್ತೆಯ ಗುಂಡಿ ತಪ್ಪಿಸಲು ಹೋಗಿ ರಸ್ತೆಬದಿಯ ಚರಂಡಿಗೆ ಕಲ್ಲು ತುಂಬಿದ್ದ ಲಾರಿ ಮಗುಚಿದ ಘಟನೆ ನಡೆದಿದೆ.

ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಪಕ್ಕದ ಚರಂಡಿಗೆ ಮಗುಚಿದೆ. ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಹೆಚ್ಚಾಗಿದ್ದು, ಪ್ರತಿದಿನ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಸಂಬಂಧಪಟ್ಟವರು ಆದಷ್ಟು ಬೇಗ ರಸ್ತೆ ದುರಸ್ತಿ ಕಾರ್ಯ ಮಾಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Leave A Reply

Your email address will not be published.