ದ.ಕ ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆ ಕುರಿತು ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ

ರಾಜ್ಯ ಸರ್ಕಾರ ಹೊರಡಿಸಿದ ಆದೇಶದಲ್ಲಿ ಕೆಲವು ಬದಲಾವಣೆ ಮಾಡಿದ ಜಿಲ್ಲಾಡಳಿತ ದ.ಕ ಜಿಲ್ಲೆಯಲ್ಲಿ 3 ದಿನ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿದೆ.

ದೇವಸ್ಥಾನ, ಸಮುದಾಯ ಭವನ, ಮನೆಗಳಲ್ಲಿ ಸರಳ ಆಚರಣೆ ನಡೆಸುವಂತೆ ಸೂಚಿಸಲಾಗಿದೆ.

ಶಾಮಿಯಾನ, ಪೆಂಡಾಲ್ ಹಾಕಿ ಗಣೇಶೋತ್ಸವ ಆಚರಣೆಗೆ ಅವಕಾಶವನ್ನು ನಿರಾಕರಿಸಲಾಗಿದೆ,ಯಾವುದೇ ಮೈದಾನ ಅಥವಾ ಜನನಿಬಿಡ ಪ್ರದೇಶಗಳಲ್ಲಿ ಆಚರಣೆ ನಡೆಸುವಂತಿಲ್ಲ ಎಂದು ದ.ಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದ್ದಾರೆ.

Leave A Reply

Your email address will not be published.