ಮಂಗಳೂರು ನಗರದಲ್ಲಿ ನಡೆಯಿತು ಮತ್ತೊಂದು ಅಮಾನವೀಯ ಘಟನೆ | ನಾಯಿಯೊಂದನ್ನು ಗೋಣಿ ಚೀಲದಲ್ಲಿ ತುಂಬಿ ಬೀದಿಗೆ ಎಸೆದ ದುಷ್ಕರ್ಮಿಗಳು

ಮಂಗಳೂರು ನಗರದಲ್ಲಿ ಯಾರೋ ದುಷ್ಕರ್ಮಿಗಳು ನಾಯಿಯೊಂದನ್ನು ಗೋಣಿ ಚೀಲದಲ್ಲಿ ತುಂಬಿಸಿ ಬೀದಿಯಲ್ಲಿ ಬಿಸಾಕಿ ಅಮಾನವೀಯತೆ ಪ್ರದರ್ಶಿಸಿದ್ದಾರೆ.

ಮಂಗಳೂರು ನಗರದ ಹೊರವಲಯದ ಕುಡುಪು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಇನ್ನು ನಾಯಿಯನ್ನು ಗಮನಿಸಿದ ವಾಮಂಜೂರು ನಿವಾಸಿ ಗ್ಲಾಟ್ಸನ್, ನಾಗೇಶ್ ಶೆಣೈ ಅವರು ತಕ್ಷಣ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಅಮಾನವೀಯ ಕೃತ್ಯದ ವಿರುದ್ಧ ನಿಂತ ಇಬ್ಬರು ಯುವಕರು ನಾಯಿಯನ್ನು ರಕ್ಷಿಸಿದ್ದಾರೆ.

ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದ್ದು, ದುಷ್ಕರ್ಮಿಗಳ ಕೃತ್ಯದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಈ ರೀತಿಯ ಕೃತ್ಯಗಳು ನಗರದಲ್ಲಿ ಮತ್ತೆ ಮತ್ತೆ ನಡೆಯುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಹಲವರು ಒತ್ತಾಯಿಸಿದ್ದಾರೆ.

Leave A Reply

Your email address will not be published.