ಶಾಲಾರಂಭದ ಜೊತೆಗೆ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸಾರಿಗೆ ನಿಗಮ|ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಈ ಬಾರಿ ಉಚಿತ ಬಸ್ ಪಾಸ್

ಮಹಾಮಾರಿಯಿಂದಾಗಿ ಮುಚ್ಚಿದ್ದ ಶಾಲಾ ಕಾಲೇಜುಗಳ ಆರಂಭಕ್ಕೆ ದಿನ ನಿಗದಿಯಾಗಿದ್ದು, ಈ ನಡುವೆ ರಾಜ್ಯ ಸಾರಿಗೆ ಸಂಸ್ಥೆಯು ಕೂಡಾ ಒಂದು ಸಿಹಿ ಸುದ್ದಿಯನ್ನು ನೀಡಿದೆ.

ಶಾಲಾ ಕಾಲೇಜುಗಳಿಗೆ ತೆರಳುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡಲಾಗುವುದು, ಈ ಬಗ್ಗೆ ಸಮಾಲೋಚಿಸಿ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಈ ಸೌಲಭ್ಯವಿದ್ದು, ಸದ್ಯ ಲಾಕ್ ಡೌನ್ ನಿಂದಾಗಿ ಎಲ್ಲಾ ಜಾತಿಯವರೂ ಸಂಕಷ್ಟದಲ್ಲಿದ್ದಾರೆ. ಆದ ಕಾರಣ ಈ ಬಾರಿ ಎಲ್ಲಾ ವಿದ್ಯಾರ್ಥಿಗಳಿಗೂ ಈ ಅವಕಾಶ ಕಲ್ಪಿಸುವ ಬಗೆಗೆ ಯೋಜನೆ ರೂಪಿಸಿದ್ದು, ಸರ್ಕಾರದ ಆರ್ಥಿಕ ಸ್ಥಿತಿಗತಿಯನ್ನು ಅವಲೋಕಿಸಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಸಚಿವರು ತಿಳಿಸಿದ್ದಾರೆ.

Leave A Reply

Your email address will not be published.