ಈ ವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಾರಾಂತ್ಯ ಕರ್ಫ್ಯೂ ತೆರವುಗೊಳಿಸಿ ಅದೇಶಿಸಿದ ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಮಹಾಮಾರಿ ಕೊರೋನದ ಪಾಸಿಟಿವ್ ರೇಟ್ ಇಳಿಮುಖವಾಗುತ್ತಿದ್ದಂತೆ ಜಿಲ್ಲೆಯಾದ್ಯಂತ ವಿಧಿಸಿದ್ದ ವೀಕೆಂಡ್ ಕರ್ಫ್ಯೂ ಈ ವಾರದಿಂದ ತೆರವುಗೊಳಿಸಿ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅದೇಶಿಸಿದ್ದಾರೆ.
ಕಳೆದ ವಾರವಷ್ಟೇ ವರ್ತಕರ ಸಂಘದ ಪ್ರಮುಖರೊಂದಿಗೆ ಫೋನ್ ಸಂಭಾಷಣೆಯಲ್ಲಿ ಈ ಬಗ್ಗೆ ಆಶ್ವಾಸನೆ ಕೊಟ್ಟಿದ್ದ ಜಿಲ್ಲಾಧಿಕಾರಿ, ಈ ವಾರದಿಂದ ವೀಕೆಂಡ್ ಕರ್ಫ್ಯೂ ಗೆ ಬ್ರೇಕ್ ಹಾಕಿದ್ದಾರೆ.
ಜಿಲ್ಲೆಯಾದ್ಯಂತ ವಾರಾಂತ್ಯದಲ್ಲಿ ಎಲ್ಲಾ ವ್ಯಾಪಾರ ವಹಿವಾಟುಗಳು ನಡೆಯಲಿದ್ದು, ಎಲ್ಲಾ ವ್ಯಾಪಾರಕ್ಕೂ ರಾತ್ರಿ ಗಂಟೆ 09ರ ವರೆಗೆ ಅನುಮತಿ ನೀಡಲಾಗಿದೆ. ಎಲ್ಲಾ ವ್ಯಾಪಾರಸ್ಥರು, ಸಿಬ್ಬಂದಿಗಳು ವಾಕ್ಸಿನ್ ಪಡೆದ ದೃಢೀಕರಣ ಪತ್ರಗಳನ್ನು ಹೊಂದಿರಬೇಕಾಗಿದ್ದು, ಪ್ರತೀ ದಿನ ರಾತ್ರಿ ಗಂಟೆ 09ರಿಂದ ಬೆಳಿಗ್ಗೆ 05 ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.