ಸರ್ಕಾರದ ಮುಖ್ಯ ಸಚೇತಕರಾಗಿ ಶಾಸಕ ಸತೀಶ್ ರೆಡ್ಡಿ

ಬೆಂಗಳೂರಿನಲ್ಲಿ ವಿಧಾನ ಸಭೆ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು,ಅದಕ್ಕೂ ಮೊದಲು ಸರ್ಕಾರದ ಮುಖ್ಯ ಸಚೇತಕ ಹುದ್ದೆ ಆಯ್ಕೆ ನಡೆದಿದೆ.ಶಾಸಕ ಸತೀಶ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ .

ಈ ಹಿಂದೆ ಮುಖ್ಯಸಚೇತಕರಾಗಿದ್ದ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಸಚಿವರಾಗಿರುವುದರಿಂದ ಸಚೇತಕ ಹುದ್ದೆಗೆ ರಾಜೀನಾಮೆ ನೀಡಿದ್ದರು‌.ಇದೀಗ ಶಾಸಕ ಸತೀಶ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ .

ಈ ಸ್ಥಾನಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಹೆಸರೂ ಚಾಲ್ತಿಯಲ್ಲಿತ್ತು.ಆದರೆ ಹಿರಿಯ ಶಾಸಕ ಸತೀಶ್ ರೆಡ್ಡಿ ಅವರನ್ನು ಸರಕಾರ ನೇಮಕಗೊಳಿಸಿ ಆದೇಶಿಸಿದೆ.

Leave A Reply

Your email address will not be published.