ಹೊಸ ಮರಳು ನೀತಿಯ ಬಗ್ಗೆ ವಿಧಾನಸೌಧದಲ್ಲಿ ಸಭೆ

ಹೊಸ ಮರಳು ನೀತಿಯ ಬಗ್ಗೆ ವಿಧಾನಸೌಧದಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ದಕ್ಷಿಣಕನ್ನಡ ಮತ್ತು ಉಡುಪಿಯ ಎಲ್ಲಾ ಶಾಸಕರು ಹಾಗೂ ಕಾರವಾರ ಜಿಲ್ಲೆಯ ಶಾಸಕರು ಉಪಸ್ಥಿತರಿದ್ದು ಚರ್ಚಿಸಲಾಯಿತು.

ಆ ಬಳಿಕ ಈ ಹಿಂದಿನ ಮರಳು ನೀತಿ ಏನಿತ್ತೋ ಅದರಲ್ಲಿ ಒಂದಷ್ಟು ಸರಳೀಕರಣ ಮಾಡಿಕೊಂಡು ಮತ್ತು ನ್ಯಾಯಾಲಯದ ಮೊರೆ ಹೋಗಿರುವ 30 ಬ್ಲಾಕ್ ಗಳನ್ನು ನ್ಯಾಯಾಲಯದ ಆದೇಶದ ಪ್ರಕಾರ ಜಿಲ್ಲಾಡಳಿತ ಮತ್ತು ಗಣಿ ಇಲಾಖೆಯು ತಕ್ಷಣ ಟೆಂಡರ್ ಪ್ರಕ್ರಿಯೆಯನ್ನು ನಡಸಲು ಕ್ರಮ ಕೈಗೊಳ್ಳುವಂತೆ ಆದೇಶಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಮರಳು ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ದಿನೇಶ್ ಮೆದು ಮತ್ತು ಸದಸ್ಯ ರಾದ ಸುರೇಶ್ ಕುಂಡಡ್ಕ ರವರು ಉಪಸ್ಥಿತರಿದ್ದರು.

Leave A Reply

Your email address will not be published.