ಬಂಟ್ವಾಳ | ಬೈಕಿನಲ್ಲಿ ಬಂದು ಮಹಿಳೆಯ ‌ಕರಿಮಣಿ ಸರ ಎಗರಿಸಿದ ಇಬ್ಬರ ಬಂಧನ

ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪಣೋಲಿಬೈಲು ಬಳಿ ನಡೆದು ಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಕರಿಮಣಿ ಸರವನ್ನು ಕಿತ್ತುಕೊಂಡು ಹೋದ ಘಟನೆ ನಡೆದಿದೆ.

ಶ್ರೀಮತಿ ವತ್ಸಲಾ(53)ರವರ ಕುತ್ತಿಗೆಯಿಂದ ಬೈಕಿನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಚಿನ್ನದ ಕರಿಮಣಿ ಸರವನ್ನು ಬಲವಂತವಾಗಿ ಕಿತ್ತು ಸುಲಿಗೆ ಮಾಡಿ ಪರಾರಿಯಾಗಿದ್ದವರನ್ನು ದಸ್ತಗಿರಿ ಮಾಡಿ ಸುಲಿಗೆ ಮಾಡಿದ್ದ ಚಿನ್ನದ ಕರಿಮಣಿ ಸರವನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಬಂಟ್ವಾಳ ಡಿ.ವೈ.ಎಸ್.ಪಿ ತಂಡ ಹಾಗೂ ಬಂಟ್ವಾಳ‌ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಗಳನ್ನು ಆರ್ಯಾಪು ಪುತ್ತೂರು ನಿವಾಸಿಗಳಾದ ರೋಹಿತ್ (22) ಹಾಗೂ ಲೋಹಿತ್ ಪಿ.ಆರ್ (20) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಸುಲಿಗೆ ಮಾಡಿದ ಮಾಂಗಲ್ಯ ಸರವನ್ನು ಹಾಗೂ ಸುಲಿಗೆ ಮಾಡಲು ಉಪಯೋಗಿಸಿದ ಅಪಾಚಿ ಮೋಟಾರು ಸೈಕಲನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸ್ವಾಧೀನಪಡಿಸಿಕೊಂಡ ಸೊತ್ತುಗಳ ಮೌಲ್ಯ 1,35,000 ರೂ. ಎಂದು ತಿಳಿದುಬಂದಿದೆ.

ಈ ಪ್ರಕರಣದ ಪತ್ತೆಯಲ್ಲಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಋಷಿಕೇಷ್ ಭಗವಾನ್ ಸೋನಾವಣೆ ಐ.ಪಿ.ಎಸ್ ರವರ ನಿರ್ದೇಶನದಂತೆ ದ.ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ಶಿವಕುಮಾರ್ ಗುಣಾರೆ ರವರ ಮಾರ್ಗದರ್ಶನದಲ್ಲಿ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ವೆಲೈಂಟೈನ್ ಡಿಸೋಜಾರವರ ನೇತ್ರತ್ವದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ಟಿ.ಡಿ ನಾಗರಾಜ್ , ಬಂಟ್ವಾಳ ನಗರ ಠಾಣಾ ಪಿ.ಎಸ್.ಐ ಶ್ರೀ ಅವಿನಾಶ್ ಗೌಡ, ಅಪರಾಧ ಪತ್ತೆ ವಿಭಾಗದ ಪಿ.ಎಸ್.ಐ ಕಲೈಮಾರ್, ಬಂಟ್ವಾಳ ಡಿ.ವೈ.ಎಸ್.ಪಿ ತಂಡದ ಉದಯ ರೈ, ಪ್ರವೀಣ್ ಎಂ, ಪ್ರಶಾಂತ್, ಇರ್ಷಾದ್, ಕುಮಾರ್ ಹೆಚ್.ಕೆ, ಹಾಗೂ ಬಂಟ್ವಾಳ ನಗರ ಠಾಣಾ ಸಿಬ್ಬಂದಿಗಳಾದ ಜಗನ್ನಾಥ ಶೆಟ್ಟಿ, ಕೃಷ್ಣ ಕುಲಾಲ್ ಮತ್ತು ಹೋಮ್ ಗಾರ್ಡ್ ಸಿಬ್ಬಂದಿ ಜಯಗಣೇಶ್ ಭಾಗವಹಿಸಿದ್ದರು. ಅತೀ ಶೀಫ್ರವಾಗಿ ಈ ಕ್ಲಿಷ್ಟಕರವಾದ ಪ್ರಕರಣವನ್ನು ಭೇದಿಸಿದ ತಂಡವನ್ನು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿ ಬಹುಮಾನ ಘೋಷಿಸಿದ್ದಾರೆ.

Leave A Reply

Your email address will not be published.