ವಾರಾಂತ್ಯದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರಿಗೆ ಪ್ರವೇಶಕ್ಕೆ ಅವಕಾಶ

ಕಡಬ : ಕಡಬ ತಾಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾರಾಂತ್ಯದಲ್ಲೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಬೆಳಿಗ್ಗೆ 7 ರಿಂದ ಸಂಜೆ 6.30 ರವರೆಗೆ ಮಾತ್ರ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

ಕಳೆದ ವಾರದವರೆಗೆ ವಾರಾಂತ್ಯದಲ್ಲಿ ದೇವಸ್ಥಾನ ದರ್ಶನಕ್ಕೆ ನಿರ್ಬಂಧಿಸಲಾಗಿತ್ತು.

ಕೊರೋನಾ ಲಾಕ್ ಡೌನ್ ನಿಂದ ಮುಚ್ಚಿದ್ದ ದೇವಸ್ಥಾನ ಲಾಕ್ ಡೌನ್ ತೆರೆದುಕೊಂಡ ಬಳಿಕದ ದಿನಗಳಲ್ಲಿ ದೇವರ ದರ್ಶನಕ್ಕೆ ತೆರದುಕೊಂಡಿತ್ತು. ವೀಕೆಂಡ್ ಕರ್ಪ್ಯೂನ ಎರಡು ದಿವಸ ಭಕ್ತರ ದರ್ಶನಕ್ಕೆ ನಿರ್ಬಂಧಿಸಲಾಗಿತ್ತು.

ಇತ್ತೀಚೆಗೆ ವೀಕೆಂಡ್ ಕರ್ಫ್ಯೂ ತೆರವಾಗಿದ್ದರೂ ದೇವಸ್ಥಾನ ಭಕ್ತರಿಗೆ ತೆರೆದುಕೊಂಡಿರಲಿಲ್ಲ. ಸೆ.18 ರ ಶನಿವಾರದಿಂದ ಮತ್ತೆ ಸಾರ್ವಜನಿಕ ದರ್ಶನ ಆರಂಭವಾಗಿದ್ದು ಸೇವೆಗಳು ಮುಂದಿನ ದಿನಗಳಲ್ಲಿ ಆರಂಭವಾಗಬೇಕಾಗಿದೆ.

Leave A Reply

Your email address will not be published.