ಮುಖ್ಯಮಂತ್ರಿ ಅಮೃತ ಜೀವನ ಯೋಜನೆಯಡಿ ಹಸು ಘಟಕಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಮುಖ್ಯಮಂತ್ರಿಗಳ ‘ಅಮೃತ ಜೀವನ ಯೊಜನೆ’ಯಡಿ ಪ.ಜಾತಿ ಮತ್ತು ಪ.ಪಂಗಡ ಫಲಾನುಭವಿಗಳಿಗೆ ಶೇ.33.33 ಹಾಗೂ ಇತರೆ ಫಲಾನುಭವಿಗಳಿಗೆ ಶೇ.25ರಷ್ಟು ಸಹಾಯಧನದಡಿ, ಒಂದು ಮಿಶ್ರತಳಿ ಹಾಲು ಕರೆಯುವ ಹಸು ಘಟಕ ಆರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಸಂಬಂದಪಟ್ಟ ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳಿಂದ ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಸೆ.30ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ದ.ಕ. ದೂ:0824-2492337 ,ಉಡುಪಿ-0820 2520659, ಕಾಪು-0820-2551175, ಬ್ರಹ್ಮಾವರ-0820 2561101, ಕುಂದಾಪುರ- 08254-230776, ಬೈಂದೂರು-08254-251076, ಕಾರ್ಕಳ- 08258- 230448 ಮತ್ತು ಹೆಬ್ರಿ-08253-251203 ಇವರನ್ನು ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Leave A Reply

Your email address will not be published.