ಅಪಘಾತ ಸ್ಥಳಕ್ಕೆ ತೆರಳಿದ್ದ ಅಂಬ್ಯುಲೆನ್ಸ್ ಚಾಲಕನಿಗೆ ಹಲ್ಲೆಗೆ ಯತ್ನ | ದೂರು ದಾಖಲು

ನೆಲ್ಯಾಡಿ : ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಿಮಿತ್ತ ಬಂದ ಅಂಬ್ಯುಲೆನ್ಸ್ ನ ಕೀ ಕಿತ್ತುಕೊಂಡು ಚಾಲಕನಿಗೆ ಹಲ್ಲೆ ನಡೆಸಲು ಮುಂದಾದ ಘಟನೆ ಉದನೆಯಿಂದ ವರದಿಯಾಗಿದೆ.

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಉದನೆ ಸಮೀಪ ಹೊಳೆ ಬದಿಗೆ ಉರುಳಿ ಬಿದ್ದಿತ್ತು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಈ ವೇಳೆ ರಕ್ಷಣಾ ಕಾರ್ಯಾಚರಣೆಗೆಂದು ಅಂಬ್ಯುಲೆನ್ಸ್ ಬಂದಿದ್ದು, ಸ್ಥಳೀಯ ನಿವಾಸಿ ಲಿಬಿನ್ ಎಂಬಾತ ಅಂಬ್ಯುಲೆನ್ಸ್ ವಾಹನದ ಕೀಯನ್ನು ಕಸಿದುಕೊಂಡು ಹಲ್ಲೆ ನಡೆಸಲು ಯತ್ನಿಸಿರುವುದಾಗಿ ಅಂಬ್ಯುಲೆನ್ಸ್ ಚಾಲಕ ನವಾಝ್ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ.

Leave A Reply

Your email address will not be published.