ಬಂಟ್ವಾಳ: ನಿಲ್ಲಿಸಿದ್ದ ಲಾರಿ ಚಲಿಸಿ ಚಾಲಕ ಮೃತ್ಯು

ಬಂಟ್ವಾಳ: ನಿಲ್ಲಿಸಲಾಗಿದ್ದ ಲಾರಿಯೊಂದು ಚಲಿಸಿ ಚಾಲಕನನ್ನೆ ಬಲಿ ಪಡೆದ ಘಟನೆ ಬಂಟ್ವಾಳ ತಾಲೂಕಿನ ಕೈಕಂಬದಲ್ಲಿ ಶುಕ್ರವಾರ ಸಂಭವಿಸಿದೆ.

ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೈಕಂಬ ಸಮೀಪದ ಪರ್ಲಿಯಾ ಕೊಡಂಗೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ.

ಬಾಗಲಕೋಟ ಜಿಲ್ಲೆಯ ಜಾವೂರು ನಿವಾಸಿ ಲಾರಿ ಚಾಲಕ ಬಾಲಪ್ಪ ಎ.ಜಾವೂರು ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಾಲಪ್ಪ ಅವರು ಗುತ್ತಿಗೆ ಕೆಲಸ ನಿರ್ವಹಿಸುವ ಸಂಸ್ಥೆಯ ಲಾರಿ ಚಾಲಕರಾಗಿದ್ದರು.

Leave A Reply

Your email address will not be published.