ಕೋಳಿ ಅಂಕದಲ್ಲಿ ಕ್ಷುಲ್ಲಕ‌ ವಿಚಾರಕ್ಕೆ ಚಕಮಕಿ | ಆರು ಮಂದಿಗೆ ಚೂರಿ ಇರಿತ,ಮೂವರ ಸ್ಥಿತಿ ಗಂಭೀರ

ಕೋಳಿ ಅಂಕದಲ್ಲಿ ಕ್ಷುಲ್ಲಕ ವಿಚಾರದಲ್ಲಿ ಉಂಟಾದ ಮಾತಿನಚಕಮಕಿಯಿಂದಾಗಿ ಯುವಕನೋರ್ವ ಆರು ಮಂದಿಗೆ ಚೂರಿಯಿಂದ ಇರಿದ ಘಟನೆ ರವಿವಾರ ರಾತ್ರಿ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಬಂಬ್ರಾಣದಲ್ಲಿ ನಡೆದಿದೆ.

ಬಂಬ್ರಾಣ ಸಮೀಪದ ಅಂಡಿತ್ತಡ್ಕ ಎಂಬಲ್ಲಿ ಈ ಘಟನೆ ನಡೆದಿದ್ದು, ಬಂಬ್ರಾಣದ ಕಿರಣ್ (29), ಕುದ್ರೆಪ್ಪಾಡಿಯ ಗುರುರಾಜ್(23), ನವೀನ್(22), ಧೀರಜ್ (21), ಪ್ರವೀಣ್ (21) ಮತ್ತು ಚರಣ್ (23) ಚೂರಿ ಇರಿತಕ್ಕೊಳಗಾದವರು. ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕುಂಬಳೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave A Reply

Your email address will not be published.