ಮಂಗಳೂರು : ಪೆಟ್ರೋಲ್ ಬಂಕ್ ಮ್ಯಾನೇಜರ್‌ಗೆ ಹಲ್ಲೆಗೈದು 4.2 ಲಕ್ಷ ದರೋಡೆ | ನಾಲ್ವರ ಬಂಧನ

ಮಂಗಳೂರು: ನಗರದ ಮಣ್ಣಗುಡ್ಡೆಯ ಆರ್ಶೀವಾದ್ ಪೆಟ್ರೋಲ್ ಬಂಕ್ ನ ಮ್ಯಾನೇಜರ್ ಗೆ ಬ್ಯಾಟ್ ನಿಂದ ಹಲ್ಲೆ ಮಾಡಿ, ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಸೆರೆಹಿಡಿಯಲಾಗಿದೆ.

ಪೆಟ್ರೋಲ್ ಬಂಕ್ ನ ಮ್ಯಾನೇಜರ್ ಬೋಜಪ್ಪನವರು ಕಲೆಕ್ಷನ್ ಆದ ಹಣ ಕಟ್ಟಲು ಬ್ಯಾಂಕಿಗೆ ಹೋಗುತ್ತಿದ್ದ ವೇಳೆ ಅದೇ ದಾರಿಯಲ್ಲಿ ಸಂಚು ಹಾಕಿ ಕಾಯುತ್ತಿದ್ದ ಅಪರಿಚಿತರು ಬೋಜಪ್ಪ ಅವರ ಮೇಲೆ ಬ್ಯಾಟಿನಿಂದ ಹಲ್ಲೆ ಮಾಡಿ, 4 ಲಕ್ಷದ 20 ಸಾವಿರ ನಗದನ್ನು ಕಸಿದುಕೊಂಡು ಸ್ಕೂಟರ್ ನಲ್ಲಿ ಪರಾರಿಯಾಗುತ್ತಾರೆ. ಈ ಸಂಬಂಧ ಊರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತಂಡವನ್ನು ಪೊಲೀಸ್ ಆಯುಕ್ತರು ರಚಿಸುತ್ತಾರೆ. ಆರೋಪಿಗಳ ಜಾಡನ್ನು ಹತ್ತಿದ ಪೊಲೀಸರು, ಬೋಜಪ್ಪನವರ ಪೆಟ್ರೋಲ್ ಪಂಪ್ ನಲ್ಲೇ ಕೆಲಸ ಮಾಡುತ್ತಿದ್ದ ಶ್ಯಾಮ್ ಶಂಕರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಾರೆ. ಈ ವೇಳೆ ಶ್ಯಾಮ್ ಶಂಕರ್ ನ ಮಾಹಿತಿಯಂತೆ ಇತರೆ ಆರೋಪಿಗಳಾದ ಅಭಿಷೇಕ್,ಕಾರ್ತಿಕ್ ಹಾಗೂ ಸಾಗರ್ ನನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಸುಲಿಗೆ ಮಾಡಿದ 60 ಸಾವಿರ ನಗದನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಲ್ಲಿ ಅಭಿಷೇಕ್, ಕಾರ್ತಿಕ್ ಈ ಹಿಂದೆ ಹಲವು ಪ್ರಕರಣದಲ್ಲಿ ಭಾಗಿಯಾದವರು

Leave A Reply

Your email address will not be published.