ನಿವೇಶನಕ್ಕೆ ಅರ್ಜಿ ಕೊಡಲು ಬಂದ ಮಹಿಳೆಗೆ ಕಿರುಕುಳ | ಗ್ರಾ.ಪಂ.ಸದಸ್ಯನ ವಿರುದ್ಧ ಪ್ರಕರಣ ದಾಖಲು

ಮಹಿಳೆಯೋರ್ವರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಮುನ್ನೂರು ಗ್ರಾಪಂ ಸದಸ್ಯನ ವಿರುದ್ಧ ಬುಧವಾರ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುನ್ನೂರು ಗ್ರಾಪಂ ಸದಸ್ಯ ಬಾಬು ಶೆಟ್ಟಿ ಪ್ರಕರಣದ ಆರೋಪಿ ಎಂದು ತಿಳಿದು ಬಂದಿದೆ.

ಘಟನೆ ವಿವರ: ನಿವೇಶನ ರಹಿತ ಮಹಿಳೆಯೊಬ್ಬರು ಸೆ.18ರಂದು ಸೈಟ್‌ಗೆ ಅರ್ಜಿ ನೀಡಲೆಂದು ಮುನ್ನೂರು ಗ್ರಾಪಂಗೆ ತೆರಳಿದ್ದರು.

ಈ ವೇಳೆ ಆರೋಪಿ ಬಾಬು ಅವರನ್ನು ಅಧ್ಯಕ್ಷರ ಕೊಠಡಿಗೆ ಕರೆಸಿ ಕಿರುಕುಳ ನೀಡಿದ ಆರೋಪ ವ್ಯಕ್ತವಾಗಿತ್ತು. ಈ ಬಗ್ಗೆ ತನಿಖೆ ನಡೆಸುವಂತೆ ಡಿವೈಎಫ್‌ಐ ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮನವಿ ಸಲ್ಲಿಸಿ ಒತ್ತಾಯಿಸಿತ್ತು.

ಈ ಹಿನ್ನೆಲೆಯಲ್ಲಿ ಮಹಿಳೆ ಉಳ್ಳಾಲ ಠಾಣೆಯಲ್ಲಿ ಕೆಲವು ದಿನಗಳ ಬಳಿಕ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave A Reply

Your email address will not be published.