ವರದಕ್ಷಿಣೆ ಕಿರುಕುಳ | ನವವಿವಾಹಿತೆ ಆತ್ಮಹತ್ಯೆ

ಗೃಹಿಣಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅಯಂಗೇರಿ ಎಂಬ ಗ್ರಾಮದಲ್ಲಿ ನಡೆದಿದೆ.

ಅಮೀರಾ(20) ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಈಕೆಗೆ 11 ತಿಂಗಳ ಹಿಂದೆ ರುವೈಸ್ ಎಂಬಾತನೊಂದಿಗೆ ವಿವಾಹವಾಗಿತ್ತು. ಆ ಬಳಿಕ ಆತ ವರದಕ್ಷಿಣೆ ಕೊಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತು ನೇಣುಬಿಗಿದುಕೊಂಡು ಅಮಿರಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ನಾಪೊಕ್ಕು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Leave A Reply

Your email address will not be published.