ಮೀನಿಗೆ ಗಾಳ ಹಾಕುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರುಪಾಲು

ಉಡುಪಿ:ಮೀನು ಹಿಡಿಯಲು ಗಾಳ ಹಾಕುತ್ತಿದ್ದ ವೇಳೆ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಜಾರಿ ಬಿದ್ದು ನೀರು ಪಾಲಾದ ಘಟನೆ ಶಿರ್ವ ನಡಿಬೆಟ್ಟು ಆಣೆಕಟ್ಟು ಬಳಿ ರವಿವಾರ ಸಂಜೆ ನಡೆದಿದೆ.

ಶಿರ್ವ ಮಟ್ಟಾರು ನಿವಾಸಿ ದಿಲೀಪ್ (30)ಎಂದು ಗುರುತಿಸಲಾಗಿದ್ದು, ಇವರು ದೈವ ನರ್ತಕರಾಗಿರುತ್ತಾರೆ.

ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು, ಅಗ್ನಿಶಾಮಕ ದಳ ಮತ್ತು ಮಲ್ಪೆಯ ಮುಳುಗು ತಜ್ಞ ಈಶ್ವರ್ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ. ನಿನ್ನೆ ರಾತ್ರಿ ಬೆಳಕಿನ ಅಡಚನೆಯಿಂದಾಗಿ ಕಾರ್ಯಚರಣೆ ಸ್ಥಗಿತಗೊಳಿಸಲಾಗಿದೆ.ಇದೀಗ ಕಾರ್ಯಾಚರಣೆ ಮುಂದುವರೆದಿದ್ದು,ಇದುವರೆಗೂ ಅವರ ಪತ್ತೆಯಾಗಿಲ್ಲ.

ಬೆಳ್ತಂಗಡಿ| ಅಕ್ರಮ ಮರಳುಗಾರಿಕೆ ವ್ಯಾಪಕ | ಅಧಿಕೃತ ಟೆಂಡರ್‌ದಾರರಿಗೆ ಸಮಸ್ಯೆ

Leave A Reply

Your email address will not be published.