ಕೋವಿಡ್ ಲಸಿಕೆ ಹಾಕಿಸಿಕೊಳ್ಳದವರಿಗೆ ಪಡಿತರ ಸ್ಥಗಿತ -ಸಚಿವ ಜೆ.ಸಿ.ಮಾಧುಸ್ವಾಮಿ

ಕೋವಿಡ್-19 ಲಸಿಕೆ ಹಾಕಿಸಿಕೊಳ್ಳದವರಿಗೆ ಪಡಿತರ ನೀಡುವುದನ್ನು ಸ್ಥಗಿತಗೊಳಿಸುವಂತೆ ಸಲಹೆ ನೀಡಿದ್ದೇನೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ತುಮಕೂರಿನಲ್ಲಿ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಈ ಹಿಂದೆ ಕೋವಿಡ್ ಲಸಿಕೆ ಇಲ್ಲ ಎನ್ನುತ್ತಿದ್ದರು.ಈಗ ಲಸಿಕೆ ಲಭ್ಯವಿದ್ದರೂ ಪಡೆದುಕೊಳ್ಳಲು ಮುಂದೆ ಬರುತ್ತಿಲ್ಲ.

ಕೋವಿಡ್ ತಡೆಗಟ್ಟಲು ಎಲ್ಲರಿಗೂ ಲಸಿಕೆ ಹಾಕುವುದು ಅನಿವಾರ್ಯವಾಗಿದ್ದು, ಹಾಕಿಸಿಕೊಳ್ಳದವರಿಗೆ ಪಡಿತರ ನೀಡುವುದನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಕೊರೊನಾ ಸೋಂಕು ಯಾವ ಸಮಯದಲ್ಲಿ ಬೇಕಾದರೂ ಹೆಚ್ಚಾಗಬಹುದು. ಹೀಗಾಗಿ ಕೊರೊನಾ ನಿಯಂತ್ರಿಸಲು ಈಗಿನಿಂದಲೇ ಕ್ರಮ ಕೈಗೊಳ್ಳದಿದ್ದರೆ ಮಂದೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Leave A Reply

Your email address will not be published.