ಮುರುಳ್ಯದಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ

ಕಾಣಿಯೂರು : ಮುರುಳ್ಯ ಗ್ರಾಮದ ಸಮಹಾದಿಯಲ್ಲಿ ಯುವಕನೋರ್ವ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.14 ರಂದು ನಡೆದಿದೆ.

ಮುರುಳ್ಯ ಸಮಹಾದಿ ದಿ.ಶೀನ ಎಂಬವರ ಪುತ್ರ ಪ್ರದೀಪ (21) ಎಂಬವರು ಮನೆಯ ಸಮೀಪದ ಗುಡ್ಡದಲ್ಲಿ ಗೇರು ಬೀಜದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.