ಪೆರುವಾಜೆ ಶ್ರೀ ಜಲದುರ್ಗಾ ದೇವಾಲಯಕ್ಕೆ ಯತೀಶ್ ಕಾನಾವುಜಾಲು ಅವರಿಂದ
ಪ್ರಿಂಟರ್ ಕೊಡುಗೆ

ಸುಳ್ಯ : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿ ಉದ್ಯೋಗದಲ್ಲಿರುವ ಯತೀಶ್ ಕಾನಾವುಜಾಲು ಅವರು ಶ್ರೀ ಕ್ಷೇತ್ರಕ್ಕೆ ಪ್ರಿಂಟರ್ ಕೊಡುಗೆಯಾಗಿ ನೀಡಿದರು.

ಹಸ್ತಾಂತರ ಸಂದರ್ಭದಲ್ಲಿ ಪೆರುವಾಜೆ ಶ್ರೀ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಸದಸ್ಯರಾದ ನಾರಾಯಣ ಕೊಂಡೆಪ್ಪಾಡಿ, ಜಗನ್ನಾಥ ರೈ ಪೆರುವಾಜೆ, ಕಾರ್ಯದರ್ಶಿ ವಸಂತ ಪೆರುವಾಜೆ, ಯಶವಂತ ಕಾನಾವುಜಾಲು ಉಪಸ್ಥಿತರಿದ್ದರು.

Leave A Reply

Your email address will not be published.