ಜಾಲ್ಸೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ,ನಜ್ಜುಗುಜ್ಜಾದ ಕಾರು,ಪ್ರಯಾಣಿಕರಿಗೆ ಗಾಯ

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಜಾಲ್ಲೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಬಳಿ ಅ.18ರಂದು ಮಧ್ಯಾಹ್ನ ಸಂಭವಿಸಿದೆ.

ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಅಡ್ಯಾರು ಮಾವಿನಕಟ್ಟೆಯ ಬಳಿ ಇರುವ ಪೊಲೀಸ್ ಬ್ಯಾರಿಕೇಡ್ ಬಳಿಗೆ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ತೋಟಕ್ಕೆ ಪಲ್ಟಿಯಾಯಿತೆನ್ನಲಾಗಿದೆ.

ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಚಾಲಕ ಸಹಿತ ಪ್ರಯಾಣಿಕರಾದ ಮೈಸೂರಿನ ಶ್ರೇಯಸ್, ಭುವನ್ ಹಾಗೂ ಸರ್ವೇಶ್ ಅವರಿಗೆ ತೀವ್ರ ತರದ ಗಾಯಗಳಾಗಿದ್ದು, ಅವರು ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave A Reply

Your email address will not be published.