ಬಂಟ್ವಾಳ | ಕಟ್ಟೆಯಲ್ಲಿದ್ದ ಭಗವಾಧ್ವಜ ಹಾಗೂ ಹನುಮನ ಚಿತ್ರಕ್ಕೆ ಹಾನಿಗೈದ ದುಷ್ಕರ್ಮಿಗಳು, ದೂರು ದಾಖಲು

ಮಾರ್ಗಸೂಚಿ ಕಟ್ಟೆಯಲ್ಲಿದ್ದ ಭಗವಾಧ್ವಜ ಹಾಗೂ ಹನುಮಂತನ ಚಿತ್ರಕ್ಕೆ ದುಷ್ಕರ್ಮಿಗಳು ಹಾನಿ ಮಾಡಿದ ಘಟನೆ ಬಂಟ್ವಾಳದ ಎಸ್ ವಿಎಸ್ ಕಾಲೇಜಿನ ಬಳಿ ಇರುವ ಮಂಡಾಡಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

10-12 ವರ್ಷಗಳಿಂದ ಈ ಕಟ್ಟೆ ಇದ್ದು, ಕಳೆದ ಕೆಲವು ದಿನಗಳ ಹಿಂದೆ ವಿಶ್ವ ಹಿಂದೂ ಪರಿಷತ್ ಮಂಡಾಡಿ ಶಾಖೆಯು ಈ ಕಟ್ಟೆಯನ್ನು ನವೀಕರಣಗೊಳಿಸಿತ್ತು. ಅದಕ್ಕೆ ಹನುಮಂತನ ಚಿತ್ರ, ಭಗವಾಧ್ವಜ ಅಳವಡಿಸಲಾಗಿತ್ತು. ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಕಟ್ಟೆಯನ್ನು ಒಡೆದುಹಾಕಿ, ಭಗವಾಧ್ವಜವನ್ನು ಕಿತ್ತೊಯ್ದಿದ್ದಾರೆ. ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ ಕಾರೊಂದು ಈ ದಾರಿಯಲ್ಲಿ ಸಂಚರಿಸಿದ್ದು , ಸಿಸಿಟಿವಿಯಲ್ಲಿ ದಾಖಲಾಗಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂಟ್ವಾಳ ವಿಹಿಂಪ ಜಿಲ್ಲಾ ಸಹಸಂಚಾಲಕ ಗುರುರಾಜ್ ಬಂಟ್ವಾಳ, ದೀಪಕ್ ಬಂಟ್ವಾಳ, ಸಂತೋಷ್ ಸರಪಾಡಿ, ಶಿವಪ್ರಸಾದ್ ತುಂಬೆ, ಅನಿಲ್ ಮಂಡಾಡಿ ದೂರು ನೀಡಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಸದ್ಯ ಪೊಲೀಸರು ಸ್ಥಳದಲ್ಲಿ ತನಿಖೆ ನಡೆಸುತ್ತಿದ್ದಾರೆ.

Leave A Reply

Your email address will not be published.