ಉಪ್ಪಿನಂಗಡಿ : ದ್ವಿಚಕ್ರ ವಾಹನಕ್ಕೆ ಮೀನು ಸಾಗಾಟದ ಲಾರಿ ಡಿಕ್ಕಿ ,ಬೈಕ್ ಸವಾರ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ಉಪ್ಪಿನಂಗಡಿ ಗೋಳಿತೊಟ್ಟು ಸಮೀಪ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ಸಮೀಪದ ಕುಂಟಲ್ಪಾಡಿ ಪದವು ನಿವಾಸಿ ಸಚಿನ್(29) ಎಂದು ತಿಳಿದು ಬಂದಿದೆ.ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸವಾರನ ತಲೆಯ ಮೇಲೆ ಮೀನು ತುಂಬಿಸಿಕೊಂಡು ಹೊರಟಿದ್ದ ಲಾರಿ ಹರಿದಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸಹಸವಾರನಿಗೆ ಗಂಭೀರ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

Leave A Reply

Your email address will not be published.