ಕಬಕ : ಪಾದಚಾರಿಗೆ ಬೈಕ್ ಡಿಕ್ಕಿ ,ಗಾಯಾಳು ಆಸ್ಪತ್ರೆಗೆ ದಾಖಲು

ಪುತ್ತೂರು: ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಘಟನೆ ಕಬಕ ಸಮೀಪದ ಅಡ್ಯಲಾಯ ದೈವಸ್ಥಾನದ ಸಮೀಪ ನಡೆದ ಬಗ್ಗೆ ವರದಿಯಾಗಿದೆ.

ವಿಟ್ಲ ಸಮೀಪದ ಗ್ಯಾರೇಜೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಅ.20ರಂದು ರಾತ್ರಿ ವೇಳೆ ಕಬಕ ಪೇಟೆಯಿಂದ ಪೋಳ್ಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಡ್ಯಲಾಯ ದೈವಸ್ಥಾನದ ಸಮೀಪ ಪುತ್ತೂರು ಭಾಗದಿಂದ ಕಬಕ ಕಡೆಗೆ ಬರುತ್ತಿದ್ದ ಕಬಕ ಸಮೀಪದ ವಿದ್ಯಾಪುರ ನಿವಾಸಿಗಳಿದ್ದ ಬೈಕ್ ಡಿಕ್ಕಿಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪಾದಚಾರಿಗೆ ತಲೆಗೆ ಗಂಭೀರ ಗಾಯವಾಗಿದ್ದು,ಅವರನ್ನು ಸ್ಥಳೀಯರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಬೈಕಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಒಮ್ಮೆಲೆ ರಸ್ತೆಗೆ ಬಂದಿರುವ ಹಿನ್ನೆಲೆಯಲ್ಲಿ ಅಪಘಾತ ಸಂಭವಿಸಿದೆ.

Leave A Reply

Your email address will not be published.