ಬಂಟ್ವಾಳ ನಗರಸಭೆಯ ಮಾಜಿ ಅಧ್ಯಕ್ಷ, ಜಿ.ಪಂ.ಮಾಜಿ ಸದಸ್ಯ ಸದಾನಂದ ಮಲ್ಲಿ ನಿಧನ

Share the Article

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯರು, ಬಂಟ್ವಾಳ ನಗರಸಭೆಯ ಅಧ್ಯಕ್ಷರಾಗಿದ್ದ ಬಂಟ್ವಾಳದ ಹಿರಿಯ ಸಾಮಾಜಿಕ, ರಾಜಕೀಯ ನಾಯಕ ಸದಾನಂದ ಮಲ್ಲಿ ಅವರು ಬುಧವಾರ ರಾತ್ರಿ ನಿಧನರಾದರು.

ರಾಜ್ಯ ಇಂಟಕ್ ಅಧ್ಯಕ್ಷರಾಗಿರುವ ರಾಕೇಶ್ ಮಲ್ಲಿ ಅವರ ತಂದೆ ಯಾಗಿರುವ ಸದಾನಂದ ಮಲ್ಲಿ ಅವರು ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು.

ಮೃತರ ನಿಧನಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ, ಹಿರಿಯ ಕಾಂಗ್ರೆಸ್ ನಾಯಕ ಬಿ. ಜನಾರ್ದನ ಪೂಜಾರಿ, ಶಾಸಕ ರಾಜೇಶ್ ನಾಯ್ಕ ಉಳೆಪಾಡಿ, ಜಿಲ್ಲಾ ಪಂಚಾಯತ್ ಸದಸ್ಯ ತುಂಬೆ ಚಂದ್ರಪ್ರಕಾಶ್ ಶೆಟ್ಟಿ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Leave A Reply

Your email address will not be published.